ಕರಾವಳಿ ವಾಯ್ಸ್ ನ್ಯೂಸ್ 

ಅಂಕೋಲಾ: ತಾಲೂಕಿನ ಬೇಲೆಕೇರಿ – ಮಂಜಗುಣಿ – ತದಡಿ – ಗೋಕರ್ಣ ರಾಜ್ಯ ಹೆದ್ದಾರಿ-304ರ ಪೂಜಗೇರಿ ಸೇತುವೆ ಶಿಥಿಲಗೊಂಡಿರುವ ಹಿನ್ನೆಲೆಯಲ್ಲಿ ಶಾಲಾ ಮಕ್ಕಳು ಹಾಗೂ ಸಾರ್ವಜನಿಕರ ಸುರಕ್ಷತೆ ದೃಷ್ಟಿಯಿಂದ ಸೇತುವೆಯಲ್ಲಿ ಭಾರಿ ವಾಹನಗಳ ಸಂಚಾರವನ್ನು ಮುಂದಿನ ಆದೇಶದವರೆಗೆ ನಿರ್ಬಂಧಿಸಲಾಗಿದೆ.

ಭಾರಿ ವಾಹನಗಳಿಗೆ ಪರ್ಯಾಯ ಮಾರ್ಗವಾಗಿ ಶೇಟಗೇರಿ ಕ್ರಾಸ್‌ನಿಂದ ಬಾಸಗೋಡ ಕ್ರಾಸ್‌ಗೆ ಸಂಪರ್ಕ ಕಲ್ಪಿಸುವ ಸುಮಾರು 3 ಕಿ.ಮೀ. ಮಾರ್ಗದಲ್ಲಿ ಸಂಚರಿಸಲು ಅವಕಾಶ ನೀಡಲಾಗಿದೆ.

ಲೋಕೋಪಯೋಗಿ ಇಲಾಖೆಯು ಸೇತುವೆಯ ಎರಡೂ ಬದಿಯಲ್ಲಿ ಭಾರಿ ವಾಹನಗಳ ಸಂಚಾರ ತಡೆಯಲು ಹೈಟ್ ಬ್ಯಾರಿಯರ್‌ (Angle Barrier) ಅಳವಡಿಸುವಂತೆ ಹಾಗೂ ಭಾರಿ ವಾಹನ ನಿಷೇಧದ ಕುರಿತು ಸ್ಪಷ್ಟವಾಗಿ ಕಾಣುವ ಎಚ್ಚರಿಕೆ ಫಲಕಗಳನ್ನು ಅಳವಡಿಸುವಂತೆ ಸೂಚಿಸಲಾಗಿದೆ.

ಪೊಲೀಸ್ ಇಲಾಖೆಯು ಅಗತ್ಯ ಸ್ಥಳಗಳಲ್ಲಿ ಬ್ಯಾರಿಕೇಡ್‌ ಅಳವಡಿಸಿ, ಸಂಚಾರ ದಟ್ಟಣೆ ಉಂಟಾಗದಂತೆ ಕ್ರಮ ಕೈಗೊಳ್ಳಬೇಕು. ವಾಹನಗಳ ಚಲನ-ವಲನದ ಮೇಲೆ ನಿಗಾ ವಹಿಸಿ ಯಾವುದೇ ಅಪಘಾತ ಸಂಭವಿಸದಂತೆ ಅಗತ್ಯ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ ಆದೇಶಿಸಿದ್ದಾರೆ.

 

Please Share: