ಕರಾವಳಿ ವಾಯ್ಸ್ ನ್ಯೂಸ್
ಕಾರವಾರ: ಕಾರವಾರ ನಗರಸಭೆ ಸಾರ್ವಜನಿಕ ಗಣೇಶೋತ್ಸವ ಸಮಿತಿ ವತಿಯಿಂದ ಗಣೇಶ ಚತುರ್ಥಿ ಅಂಗವಾಗಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.
ಸೆ.14ರಂದು ಶ್ರೀ ಮಹಾಗಣಪತಿ ಮೂರ್ತಿ ಪ್ರತಿಷ್ಠಾಪನೆ ನೆರವೇರಿದ್ದು, ಸೆ.18ರಂದು ಶುಕ್ರವಾರ ಗಣಹೋಮದ ಬಳಿಕ ಮಧ್ಯಾಹ್ನ 1 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಅನ್ನಸಂತರ್ಪಣೆ ನಡೆಯಲಿದೆ. ಈ ಅನ್ನಸಂತರ್ಪಣೆಯನ್ನು ವಿಧಾನಪರಿಷತ್ ಶಾಸಕ ಗಣಪತಿ ಉಳ್ವೆಕರ್ ಹಾಗೂ ಕಾರವಾರ ನಗರಸಭೆಯ ಮಾಜಿ ಅಧ್ಯಕ್ಷ ಡಾ. ನಿತಿನ್ ಪಿಕಳೆ ಅವರು ಪ್ರಾಯೋಜಿಸಿದ್ದಾರೆ.

ಸೆ.21ರಂದು ಸೋಮವಾರ ಸಂಜೆ 6 ಗಂಟೆಗೆ ಮಹಾಪೂಜೆ ನಡೆಯಲಿದ್ದು, ಎಲ್ಲ ಕಾರ್ಯಕ್ರಮಗಳಲ್ಲೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಶ್ರೀ ಮಹಾಗಣಪತಿಯ ಪ್ರಸಾದ ಸ್ವೀಕರಿಸುವಂತೆ ಸಮಿತಿ ಅಧ್ಯಕ್ಷರು ಕೋರಿದ್ದಾರೆ.
ಕಾರವಾರ ನಗರಸಭೆಯ ಪೌರಾಯುಕ್ತರು, ಅಧಿಕಾರಿಗಳು, ಸಿಬ್ಬಂದಿ ಹಾಗೂ ಪೌರ ನೌಕರರು ಸರ್ವ ಭಕ್ತರಿಗೆ ಕಾರ್ಯಕ್ರಮಕ್ಕೆ ಸುಸ್ವಾಗತ ಕೋರಿದ್ದಾರೆ.


