ಕರಾವಳಿ ವಾಯ್ಸ್ ನ್ಯೂಸ್

ಬೆಂಗಳೂರು: ಸ್ಯಾಂಡಲ್‌ವುಡ್‌ನ ಖ್ಯಾತ ಖಳನಟ, ‘ಕೆಜಿಎಫ್ ಚಾಚಾ’ ಎಂದೇ ಪ್ರಖ್ಯಾತರಾದ ನಟ ಹರೀಶ್ ರಾಯ್‌ (57) ಅವರು ಇಂದು(ಗುರುವಾರ) ಬೆಳಗ್ಗೆ ಬೆಂಗಳೂರಿನಲ್ಲಿ ನಿಧನರಾದರು.

ಥೈರಾಯ್ಡ್ ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಹರೀಶ್ ರಾಯ್ ಅವರು ಕೆಲಕಾಲದಿಂದ ಬೆಂಗಳೂರಿನ ಕಿದ್ವಾಯಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು, ಆದರೆ ಚಿಕಿತ್ಸೆ ಫಲಕಾರಿಯಾಗದೆ ಪ್ರಾಣಬಿಟ್ಟಿದ್ದಾರೆ.

ಸುಮಾರು ಎರಡು ದಶಕಗಳಿಂದ ಕನ್ನಡ ಚಿತ್ರರಂಗದಲ್ಲಿ ಸಕ್ರಿಯವಾಗಿದ್ದ ಹರೀಶ್ ರಾಯ್ ಅವರು ಖಳನಟನಾಗಿ, ಪೋಷಕ ಪಾತ್ರಗಳಲ್ಲಿ ತಮ್ಮದೇ ಆದ ಗುರುತನ್ನು ಮೂಡಿಸಿದ್ದರು.

ಶಿವರಾಜ್ ಕುಮಾರ್ ಅಭಿನಯದ ‘ಓಂ’ ಚಿತ್ರದಲ್ಲಿನ ‘ರಾಯ್’ ಪಾತ್ರದಿಂದ ಅವರು ಪ್ರೇಕ್ಷಕರ ಮನಸ್ಸಿನಲ್ಲಿ ಅಚ್ಚಳಿಯದ ಸ್ಥಾನ ಪಡೆದಿದ್ದರು.

ಅವರು ಅಭಿನಯಿಸಿದ ಪ್ರಮುಖ ಚಿತ್ರಗಳಲ್ಲಿ —ಕೆಜಿಎಫ್ ಚಾಪ್ಟರ್ 1 ಹಾಗೂ 2, ಓಂ, ಮೆಜೆಸ್ಟಿಕ್, ಜೋಡಿಹಕ್ಕಿ, ಕಾಶಿ, ಚಕ್ರವರ್ತಿ, ನಲ್ಲ, ಭೂಗತ, ಸಂಜು ವೆಡ್ಸ್ ಗೀತಾ, ಸ್ವಯಂವರ, ತಾಯವ್ವ, ಜಾಫರ್ ಅಲಿಯಾಸ್ ಮುರ್ಗಿ ಜಾಫರ್ ಮೊದಲಾದವು ಪ್ರಮುಖವಾದವು.

ಕನ್ನಡದಷ್ಟೇ ಅಲ್ಲ, ಅವರು ತಮಿಳು ಚಿತ್ರರಂಗದಲ್ಲಿಯೂ ತಮ್ಮ ಅಭಿನಯದ ಗುರುತು ಬಿಟ್ಟಿದ್ದರು. ಚಿತ್ರರಂಗದ ಗಣ್ಯರು ಹಾಗೂ ಅಭಿಮಾನಿಗಳು ಹರೀಶ್ ರಾಯ್ ಅವರ ನಿಧನಕ್ಕೆ ಶೋಕ ವ್ಯಕ್ತಪಡಿಸಿದ್ದಾರೆ.

 

Please Share: